Click here to Download MyLang App

ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು (ಇಬುಕ್)

ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು (ಇಬುಕ್)

e-book

ಪಬ್ಲಿಶರ್
ಕೆ.ವಿ. ಸುಬ್ಬಣ್ಣ
ಮಾಮೂಲು ಬೆಲೆ
Rs. 100.00
ಸೇಲ್ ಬೆಲೆ
Rs. 100.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

‘ಕವಿರಾಜಮಾರ್ಗ’ವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. ‘ಕವಿರಾಜಮಾರ್ಗ’ ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ. ‘ಕಾವೇರಿಯಿಂದಂ-ಆ - ಗೋದಾವರಿವರಂ - ಇರ್ದ - ನಾಡು - ಅದು ಆ ಕನ್ನಡದೊಳ್‌ಭಾವಿಸಿದ ಜನಪದಂ’. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು ‘ಭಾವಿತ’ವಾದದ್ದು; ‘ಕನ್ನಡ’ ವೆಂಬುದರ ಒಳಗಡೆ -- ಆ ಚಿಪ್ಪಿನ ಒಳಗೆ ಎನ್ನಿ -- ‘ಭಾವಿತ’ ವಾದದ್ದು. ಅಂದರೆ, ‘ಕನ್ನಡ’ ವೆಂಬುದು ಒಂದು ಚಿತ್-ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್ - ಜಗತ್ತಿನೊಳಗೆ ಮೈದಾಳಿದ್ದಾಗಿ ಅನಂತರ ನಿರ್ಮಿತಗೊಂಡಿದೆ. ಮತ್ತು ಇದು, ‘ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ’. ವಸುಧಾ (ಭೂಮಿ) ಎನ್ನುವುದು ಅನಂತ ಬ್ರಹ್ಮಾಂಡದೊಳಗಿನ ಒಂದು ‘ವಲಯ’ ಅಷ್ಟೇ; ಮತ್ತು ‘ಕನ್ನಡ’ ವೆಂಬ ‘ವಿಷಯ’ (ನಾಡು) ವು ಆ ವಸುಧಾವಲಯದಲ್ಲಿ ‘ವಿಲೀನ’ ವಾಗಿದೆ, ಸಮರಸವಾಗಿ ಬೆರೆತುಕೊಂಡಿದೆ. ಹಾಗೆಂದಮಾತ್ರಕ್ಕೆ ಇದು ಸ್ವಂತಿಕೆಯ ಚಹರೆಯಿಲ್ಲದೆ ವಸುಧೆಯಲ್ಲಿ ಗುರುತು ಸಿಗದಂತೆ ಮುಳುಗಿಹೋದದ್ದಲ್ಲ; ತನ್ನದೇ ‘ವಿಶೇಷ’ (ವೈಶಿಷ್ಟ್ಯ) ಇರುವ ನಾಡು. ಅಷ್ಟೇ ಅಲ್ಲ -- ಇದು ‘ವಿಶದ’ ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, ‘ವಸುಧಾವಲಯ ವಿಲೀನ, ವಸುಧೆಯ ಒಳಗಿನ ಒಂದು ಕಿರುಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ ‘ಕನ್ನಡ’ ದ ಇಂಥ ಪ್ರತಿಮೆಯನ್ನು ‘ಕವಿರಾಜಮಾರ್ಗ’ವು ಕಂಡರಿಸಿಟ್ಟಿದೆ.

 

ಪುಟಗಳು: 128

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !