Click here to Download MyLang App

ರಾಘವಾಂಕನ ಹರಿಶ್ಚಂದ್ರ ಕಾವ್ಯ ಪ್ರವೇಶ,    ಡಾ. ಜಿ.ಎಸ್. ಭಟ್,  Raghavankana Harischandra Kaavya Pravesha,  Harischandra Kaavya by Raghavanka,  Dr. G.S. Bhat,

ರಾಘವಾಂಕನ ಹರಿಶ್ಚಂದ್ರ ಕಾವ್ಯ ಪ್ರವೇಶ (ಇಬುಕ್)

e-book

ಪಬ್ಲಿಶರ್
ಡಾ. ಜಿ.ಎಸ್. ಭಟ್
ಮಾಮೂಲು ಬೆಲೆ
Rs. 80.00
ಸೇಲ್ ಬೆಲೆ
Rs. 80.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ABOUT THE AUTHOR

ರಾಘವಾಂಕನ ಕಾಲ ೧೩ನೇ ಶತಮಾನ; ಸುಮಾರು ಕ್ರಿ.ಶ. ೧೧೬೫ರಿಂದ ೧೨೯೦ರ ಅವಧಿಯಲ್ಲಿ ಜೀವಿಸಿರಬಹುದೆಂದು ವಿದ್ವಾಂಸರ ನಿರ್ಣಯ. ಇವನು ಹಂಪೆಯಲ್ಲಿ ಹುಟ್ಟಿ ಬೆಳೆದವನು. ತಂದೆ ಮಹಾದೇವ ಭಟ್ಟ, ತಾಯಿ ರುದ್ರಾಣಿ. ಹಂಪೆಯ ಹರಿಹರನ ಸೋದರಳಿಯ ಮತ್ತು ಶಿಷ್ಯ. ಗುರುಗಳಾದ ಮಹಾದೇವ ಮತ್ತು ಹರಿಹರರ ಶಿವಪೂಜೆ ಮತ್ತು ಜಂಗಮಪ್ರೇಮವನ್ನು ತನ್ನ ಕೃತಿಗಳಲ್ಲಿ ಈತ ಎತ್ತಿ ಹಿಡಿದಿದ್ದಾನೆ. ರಾಘವಾಂಕನು ಹರಿಶ್ಚಂದ್ರ ಕಾವ್ಯ, ಸಿದ್ಧರಾಮ ಪುರಾಣ, ಸೋಮನಾಥ ಚರಿತೆ, ವೀರೇಶ್ವರ ಚರಿತೆ, ಶರಭ ಚಾರಿತ್ರ್ಯ ಮುಂತಾದ ಕಾವ್ಯಗಳನ್ನು ಬರೆದಿದ್ದಾನೆ. ವಾರ್ಧಕ ಷಟ್ಪದಿ ಇವನ ಮೆಚ್ಚಿನ ಛಂದಸ್ಸು. ಅದುವರೆಗೆ ಪ್ರಚಲಿತವಿದ್ದ ವೃತ್ತ-ಚಂಪೂ ಶೈಲಿಗಳನ್ನು ಬಿಟ್ಟು ದೇಸಿಯ ಷಟ್ಪದಿಯನ್ನು ಬಳಸಿದ ಕೀರ್ತಿ ರಾಘವಾಂಕನದ್ದೆಂದು ವಿದ್ವಾಂಸರ ಮತ. ಈತನು ‘ಹರನೆಂಬುದೇ ಸತ್ಯ ಸತ್ಯವೆಂಬುದೆ ಹರನು ಎರಡಿಲ್ಲವೆಂದು’ ಸಾರುವ ಶ್ರುತಿಯ ಮಾತನ್ನು ಸಾರಲು ‘ಹರಿಶ್ಚಂದ್ರ ಕಾವ್ಯ’ವನ್ನು ಬರೆದುದಾಗಿ ಹೇಳಿಕೊಂಡಿದ್ದಾನೆ. ಇವನಿಗೆ ‘ಚತುರ ಕವಿರಾಯ ಹಂಪೆಯ ಹರೀಶ್ವರನ ವರಸುತ, ಉಭಯಕವಿ ಕಮಲರವಿ’ ಎಂಬ ಬಿರುದಾವಳಿಗಳಿವೆ.

 

ಪುಟಗಳು: 115

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !