Click here to Download MyLang App

ನಾಗೇಶ ಹೆಗಡೆ ಅವರ ಆಯ್ದ ಬರಹಗಳು,  ನಾಗೇಶ ಹೆಗಡೆ,    Nagesh Hegde Avara Aayda Barahagalu,  Nagesh Hegde,

ನಾಗೇಶ ಹೆಗಡೆ ಅವರ ಆಯ್ದ ಬರಹಗಳು (ಇಬುಕ್)

e-book

ಪಬ್ಲಿಶರ್
ನಾಗೇಶ ಹೆಗಡೆ
ಮಾಮೂಲು ಬೆಲೆ
Rs. 60.00
ಸೇಲ್ ಬೆಲೆ
Rs. 60.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ -- ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ABOUT THE AUTHOR

ನಾಗೇಶ ಹೆಗಡೆ ಅವರು ೧೪ ಫೆಬ್ರವರಿ ೧೯೪೮ರಂದು ಉ.ಕ. ಜಿಲ್ಲೆ ಶಿರಸಿ ಬಳಿಯ ಬಕ್ಕೆಮನೆಯಲ್ಲಿ ಜನಿಸಿದರು. ಖರಗಪುರ ಐಐಟಿ ಮತ್ತು ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯಗಳಲ್ಲಿ ಭೂಗರ್ಭಶಾಸ್ತ್ರ ಮತ್ತು ಪರಿಸರವಿಜ್ಞಾನ ಕುರಿತು ಅಧ್ಯಯನ ನಡೆಸಿದ ಅವರು ಕೆಲಕಾಲ ನೈನಿತಾಲ್‌ನ ಕುಮಾವೋ ವಿ.ವಿ.ಯಲ್ಲಿ ಪ್ರಾಧ್ಯಾಪಕರಾಗಿದ್ದರು; ಬಳಿಕ ದೀರ್ಘಕಾಲ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಮಾಡಿ ನಿವೃತ್ತರಾದರು. ಪರಿಸರವಿಜ್ಞಾನ ಕುರಿತ ಇವರ ಹಲವಾರು ಪುಸ್ತಕಗಳಲ್ಲಿ ‘ಇರುವುದೊಂದೇ ಭೂಮಿ’, ‘ನಮ್ಮೊಳಗಿನ ಬ್ರಹ್ಮಾಂಡ’, ‘ಮುಷ್ಠಿಯಲ್ಲಿ ಮಿಲೆನಿಯಂ’ ಪ್ರಮುಖವಾದವು. ಕುಸುಮಾ ಸೊರಬ ಅವರನ್ನು ಕುರಿತ ‘ಶತಮಾನದ ಕುಸುಮ’ ಮತ್ತು ನಾಲ್ಕು ಸಂಪುಟಗಳ ‘ಕರ್ನಾಟಕ ಪರಿಸರ ಪರಿಸ್ಥಿತಿ’ ಕೃತಿಗಳನ್ನೂ ಇವರು ಸಂಪಾದಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಿವರಾಮಕಾರಂತ ಪ್ರಶಸ್ತಿ ಮೊದಲಾದ ಮನ್ನಣೆಗಳು ಇವರಿಗೆ ದೊರಕಿವೆ. ಪ್ರಸ್ತುತ ಬೆಂಗಳೂರು ಸಮೀಪದ ಹಳ್ಳಿಯೊಂದರಲ್ಲಿ ಬದುಕುತ್ತಿರುವ ನಾಗೇಶ ಹೆಗಡೆ ಲೇಖನ-ಅಧ್ಯಾಪನಗಳಲ್ಲಿ ತೊಡಗಿಕೊಂಡಿದ್ದಾರೆ. 

 

ಪುಟಗಳು: 156

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !